Bhasaka
← Back to home

ಚಿನ್ಮಯ ಚಿದಾನಂದ ನೀನೆ

Author: ವಿಜಯದಾಸCategory: ಶ್ರೀಕೃಷ್ಣ
ಚಿನ್ಮಯ ಚಿದಾನಂದ ನೀನೆ ಸನ್ನುತಾಂಗಿಯ ರಮಣ ಸಕಲ ಲೋಕಕೆ ಕರುಣ ಭೃಗು ಮುನಿಪ ಹರಿಹರಾ ಹಿರಣ್ಯಗರ್ಭಾ ದಿಗಳ ವೆಗ್ಗಳವ ನೋಡಲಿ ಬಂದ್ಯೋ ಮಿಗಿಲಾದ ಪರದೈವ ಹರಿಯೆಂದು ಕೊಂಡಾಡೆ ಗಗನ ವಾಸಿಗಳು ಪೂಮಳೆಗರಿಯೆ ಹರುಷದಲಿ ||1|| ಮಡುವಿನೊಳ್ ಕರಿರಾಜ ಸಿಕ್ಕಿ ಸಾವಿರದ ವರುಷ ಬಿಡದೆ ನಕ್ರನ ಕೂಡ ಕಾದಿ ಸೋತು ಒಡಿಯರಾರುಂಟೆ ತ್ರಿಮೂರ್ತಿಗಳೊಳಗೆನಲು ಮೃಡನಜರು ಬೆರಗಾಗಿ ಸಾಮಜನ ಪಾಲಿಸಿದೆ ||2|| ಸೃಷ್ಟಿಜಲ ಮುಸುಕಿ ಬ್ರಹ್ಮಾಂಡ ಪ್ರಳಯಕಾಲದಲಿ ನಿಟಿಲಾಕ್ಷ ಮೊದಲಾದ ದೇವತೆಗಳು ಜಠರದೊಳು ಜಗಕರ್ತುನೆಂದೆನಿಸಿದೆ ವಟಪತ್ರಶಯನ ಸಿರಿವಿಜಯವಿಠ್ಠಲರೇಯಾ||3||

Thoughts & Reflections

0

No reflections shared yet. Be the first to share your thoughts!

Share your thought